ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಂಸದ ಬಿ. ಶ್ರೀರಾಮುಲು ಸ್ಪರ್ಧಿಸಿರುವ ಹೈವೋಲ್ಟೇಜ್ ಕ್ಷೇತ್ರ ಬಾದಾಮಿಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್ ಗೆ ಐ.ಟಿ. ಶಾಕ್ ನೀಡಿದೆ.
ಕಾಂಗ್ರೆಸ್ ಮುಖಂಡರೊಬ್ಬರಿಗೆ ಸೇರಿದ ರೆಸಾರ್ಟ್ ಮೇಲೆ ಐ.ಟಿ. ಇಲಾಖೆ ಜಂಟಿ ನಿರ್ದೇಶಕರ ನೇತೃತ್ವದ 10 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ತಡರಾತ್ರಿ ದಾಳಿ ಮಾಡಿದೆ. ಸಿ.ಆರ್.ಪಿ.ಎಫ್., ಸ್ಥಳೀಯ ಪೊಲೀಸರ ಭದ್ರತೆಯೊಂದಿಗೆ ಐ.ಟಿ. ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬಾದಾಮಿ ಹೊರ ವಲಯದಲ್ಲಿರುವ ಈ ರೆಸಾರ್ಟ್ ಇತ್ತೀಚೆಗಷ್ಟೇ ಕಾಂಗ್ರೆಸ್ ಗೆ ಸೇರಿದ ವಿಜಯನಗರ ಕ್ಷೇತ್ರದ ಅಭ್ಯರ್ಥಿ ಆನಂದ್ ಸಿಂಗ್ ಅವರಿಗೆ ಸೇರಿದ್ದಾಗಿದೆ. ಐ.ಟಿ. ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಆಪ್ತ ಸಿ.ಎಂ. ಇಬ್ರಾಹಿಂ ರೆಸಾರ್ಟ್ ನಲ್ಲಿದ್ದರು. ದಾಳಿಯ ಬಳಿಕ ಅವರು ಅಲ್ಲಿಂದ ಹೊರಗೆ ಹೋಗಿದ್ದಾರೆ. ಅಧಿಕಾರಿಗಳಿಂದ ಪರಿಶೀಲನೆ ಕಾರ್ಯ ಇನ್ನೂ ಮುಂದುವರೆದಿದೆ.