Quantcast
Channel: Latest News | Kannada Dunia | Kannada News | Karnataka News | India News
Viewing all articles
Browse latest Browse all 103032

ತರಕಾರಿ ಖರೀದಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ

$
0
0
ತರಕಾರಿ ಖರೀದಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಾಮಾನ್ಯರಂತೆ ಮಾರುಕಟ್ಟೆಗೆ ತೆರಳಿ ಶಾಪಿಂಗ್ ಮಾಡಿದ್ದಾರೆ. ಅಲ್ಲದೇ ಟೊಮಾಟೋ, ಸೌತೆಕಾಯಿ ಸೇರಿದಂತೆ ಸುಮಾರು 200 ರೂ. ಬೆಲೆಯ ತರಕಾರಿಯನ್ನು ಖರೀದಿಸಿದ್ದಾರೆ.

ಮಧ್ಯವರ್ತಿಗಳಿಲ್ಲದೆ ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಲು ಮುಂದಾಗಿರುವ ಮಹಾರಾಷ್ಟ ಸರ್ಕಾರ, ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯದ ಹಲವೆಡೆ ಮಾರುಕಟ್ಟೆಯನ್ನು ಆರಂಭಿಸಲು ಅವಕಾಶ ನೀಡಿದೆ. ಪುಣೆಯಲ್ಲಿ 27, ನಾಗ್ಪುರದಲ್ಲಿ 3 ಹಾಗೂ ಥಾಣೆಯಲ್ಲಿ ಒಂದು ಮಾರುಕಟ್ಟೆಯನ್ನು ಸ್ಥಾಪಿಸಲಾಗಿದ್ದು, ವಿಧಾನ ಭವನದಲ್ಲಿ ಇದರ ಶಾಖೆಯನ್ನು ತೆರೆಯಲಾಗಿದೆ.

ಇಲ್ಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತರಕಾರಿ ಖರೀದಿಸಿದ್ದಾರೆ. ಬಳಿಕ ಮಾತನಾಡಿದ ಅವರು, ರೈತರು ತಾವು ಬೆಳೆಯುವ ಬೆಳೆಗೆ ನ್ಯಾಯಯುತ ಬೆಲೆ ದೊರೆಯಬೇಕೆಂಬ ಕಾರಣಕ್ಕೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಈ ಮಳಿಗೆಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲೆಡೆಯೂ ಆರಂಭಿಸಲಾಗುವುದೆಂದು ತಿಳಿಸಿದರಲ್ಲದೇ ಇದರಿಂದ ರೈತರು ಹಾಗೂ ಗ್ರಾಹಕರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.


Viewing all articles
Browse latest Browse all 103032

Trending Articles