Quantcast
Channel: Latest News | Kannada Dunia | Kannada News | Karnataka News | India News
Viewing all articles
Browse latest Browse all 103032

ಬೆಂಗಳೂರು- ಮೈಸೂರು ಸಂಚಾರ ಬಂದ್

$
0
0
ಬೆಂಗಳೂರು- ಮೈಸೂರು ಸಂಚಾರ ಬಂದ್

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕೆಂದು, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದೆ.

ಬೆಂಗಳೂರಿನ ಮೈಸೂರು ರಸ್ತೆಯ ರಾಜರಾಜೇಶ್ವರಿ ಬಳಿ ಬೆಳಿಗ್ಗೆಯಿಂದಲೇ ಕನ್ನಡ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದು, ಬೆಂಗಳೂರು- ಮೈಸೂರು ಸಂಚಾರ ಬಂದ್ ಆಗಿದೆ. ಸುಮಾರು 2 ಕಿಲೋ ಮೀಟರ್ ಉದ್ದದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರ ಅಸ್ತವ್ಯಸ್ತಗೊಂಡಿತ್ತು. ರಸ್ತೆ ಮಧ್ಯದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ.

ನೂರಾರು ಸಂಖ್ಯೆಯಲ್ಲಿದ್ದ ಕನ್ನಡ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರು- ಮೈಸೂರು ಹೆದ್ದಾರಿ ಬಂದ್ ಮಾಡಿದ್ದರಿಂದ ಬೆಳಿಗ್ಗೆಯಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ ಎನ್ನಲಾಗಿದೆ.


Viewing all articles
Browse latest Browse all 103032

Trending Articles



<script src="https://jsc.adskeeper.com/r/s/rssing.com.1596347.js" async> </script>