Quantcast
Channel: Latest News | Kannada Dunia | Kannada News | Karnataka News | India News
Viewing all articles
Browse latest Browse all 103032

ಆನೆ ದಾಳಿಗೆ ಅರಣ್ಯ ಇಲಾಖೆ ನೌಕರ ಬಲಿ

$
0
0
ಆನೆ ದಾಳಿಗೆ ಅರಣ್ಯ ಇಲಾಖೆ ನೌಕರ ಬಲಿ

ರಾಮನಗರ: ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ, ಅರಣ್ಯ ಇಲಾಖೆ ನೌಕರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಭೆಂಡರಕಟ್ಟೆಯಲ್ಲಿ ನಡೆದಿದೆ.

ಅರಣ್ಯ ಇಲಾಖೆ ಕಾವಲುಗಾರ 38 ವರ್ಷದ ಪಂಚಲಿಂಗಯ್ಯ ಮೃತಪಟ್ಟವರು. ಪಂಚಲಿಂಗಯ್ಯ ಕಾಡಿನಿಂದ ಬಂದಿದ್ದ ಆನೆಯನ್ನು ಕಾಡಿಗೆ ಅಟ್ಟುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಪಂಚಲಿಂಗಯ್ಯ ಅವರು, ಭೆಂಡರಕಟ್ಟೆಯ ಸಮೀಪ ಕಾಣಿಸಿಕೊಂಡು, ಆತಂಕ ಮೂಡಿಸಿದ್ದ ಕಾಡಾನೆಯನ್ನು ವಾಪಸ್ ಕಾಡಿಗೆ ಕಳಿಸುತ್ತಿದ್ದರು. ಈ ಸಂದರ್ಭದಲ್ಲಿ ಪಂಚಲಿಂಗಯ್ಯ ಅವರ ಮೇಲೆ ಆನೆ ದಾಳಿ ಮಾಡಿದೆ ಎನ್ನಲಾಗಿದೆ.

ಆನೆ ದಾಳಿಯಿಂದಾಗಿ ಪಂಚಲಿಂಗಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Viewing all articles
Browse latest Browse all 103032

Trending Articles



<script src="https://jsc.adskeeper.com/r/s/rssing.com.1596347.js" async> </script>