Quantcast
Channel: Latest News | Kannada Dunia | Kannada News | Karnataka News | India News
Viewing all articles
Browse latest Browse all 103032

ಮಾಜಿ ಸಿಎಂ ಎಸ್.ಎಂ. ಕೃಷ್ಣಗೆ ಶುರುವಾಯ್ತಾ ಸಂಕಷ್ಟ?

$
0
0
ಮಾಜಿ ಸಿಎಂ ಎಸ್.ಎಂ. ಕೃಷ್ಣಗೆ ಶುರುವಾಯ್ತಾ ಸಂಕಷ್ಟ?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಸಂಕಷ್ಟ ಎದುರಾದಂತಿದೆ. ಅವರು ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಅಕ್ರಮವಾಗಿ ಲಾಟರಿ ದಂಧೆ ನಡೆಯಲು ನೆರವಾಗಿದ್ದರು ಎಂದು ಆರೋಪಿಸಲಾಗಿದೆ.

ರಾಜ್ಯ ಲಾಟರಿ ಮಾರಾಟಗಾರರು ಮತ್ತು ಏಜೆಂಟರ ಸಂಘದ ಅಧ್ಯಕ್ಷ ಸಿ.ರಾಮಕೃಷ್ಣ, ಲಾಟರಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್.ಎಂ.ಕೃಷ್ಣ ಮತ್ತು ಇತರೆ 9 ಮಂದಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು ನೀಡಿದ್ದಾರೆ. ರಾಜ್ಯದಲ್ಲಿ 2001ರಲ್ಲಿ ಆನ್ ಲೈನ್ ಲಾಟರಿ, ಇತರೆ ರಾಜ್ಯಗಳ ಒಂದಂಕಿ ಲಾಟರಿ ಮತ್ತು ಎರಡಂಕಿ ಲಾಟರಿಗಳನ್ನು ಆರಂಭಿಸಿದ್ದು, ಸರ್ಕಾರಕ್ಕೆ ಆದಾಯ ಇಲ್ಲದಿದ್ದರೂ, ಸಿಕ್ಕಿಂ, ನಾಗಾಲ್ಯಾಂಡ್, ಮೇಘಾಲಯ ಮೊದಲಾದ ರಾಜ್ಯಗಳ ನೂರಕ್ಕೂ ಹೆಚ್ಚು ಲಾಟರಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಅಕ್ರಮವಾಗಿ ಲಾಟರಿ ದಂಧೆ ನಡೆಯಲು ಸಹಕಾರ ನೀಡಿದ್ದಾರೆ. ಹಾಗಾಗಿ 2001 ರಿಂದ 2007 ರವರೆಗಿನ ಲಾಟರಿ ಮಾರಾಟಕ್ಕೆ ಸಂಬಂಧಿಸಿದಂತೆ ನಡೆದಿರುವ ಹಗರಣ ತನಿಖೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.


Viewing all articles
Browse latest Browse all 103032

Trending Articles



<script src="https://jsc.adskeeper.com/r/s/rssing.com.1596347.js" async> </script>