Quantcast
Channel: Latest News | Kannada Dunia | Kannada News | Karnataka News | India News
Viewing all articles
Browse latest Browse all 103032

ರೈಲು ತಡೆಗೆ ಮುಂದಾದವರ ಅರೆಸ್ಟ್

$
0
0
ರೈಲು ತಡೆಗೆ ಮುಂದಾದವರ ಅರೆಸ್ಟ್

ಶಿವಮೊಗ್ಗ: ಕಾವೇರಿ ನದಿ ನೀರಿನ ವಿಚಾರವಾಗಿ ಶಿವಮೊಗ್ಗದಲ್ಲಿ ಹೋರಾಟ ಮುಂದುವರೆದಿದೆ. ರೈಲು ತಡೆಗೆ ಮುಂದಾದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಕಾವೇರಿ ವಿಚಾರವಾಗಿ ಇಂದು ರಾಜ್ಯದಲ್ಲಿ ರೈಲು ಸಂಚಾರ ಬಂದ್ ಮಾಡಿ, ಪ್ರತಿಭಟನೆ ನಡೆಸಲು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಂತರ ರೈಲು ತಡೆದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ಕರೆದೊಯ್ದಿದ್ದಾರೆ.

ರೈಲು ನಿಲ್ದಾಣದೊಳಗೆ ಘೋಷಣೆ ಕೂಗುತ್ತಾ ಆಗಮಿಸಿದ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು, ರೈಲು ತಡೆಯಲು ಮುಂದಾದರು. ಇದಕ್ಕೆ ಅವಕಾಶ ಕೊಡದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.


Viewing all articles
Browse latest Browse all 103032

Trending Articles



<script src="https://jsc.adskeeper.com/r/s/rssing.com.1596347.js" async> </script>