Quantcast
Channel: Latest News | Kannada Dunia | Kannada News | Karnataka News | India News
Viewing all articles
Browse latest Browse all 103032

ಆತ್ಮಾಹುತಿ ದಾಳಿಗೆ ಮೂವರು ಯೋಧರು ಹುತಾತ್ಮ

$
0
0
ಆತ್ಮಾಹುತಿ ದಾಳಿಗೆ ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದು, ಬಾರಾಮುಲ್ಲಾದ ಉರಿ ಸೆಕ್ಟರ್ ನಲ್ಲಿ ಆತ್ಮಾಹುತಿ ದಾಳಿ ನಡೆಸಿದ್ದಾರೆ.

12 ನೇ ಆರ್ಮಿ ಸೆಕ್ಟರ್ ಕೇಂದ್ರ ಕಚೇರಿಯೊಳಗೆ 3-4 ಮಂದಿ ಭಯೋತ್ಪಾದಕರು ಬೆಳಗಿನ ಜಾವ ನುಗ್ಗಿದ್ದು, ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ 8 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ಸೇರಿಸಲಾಗಿದೆ. ಬೆಳಗಿನ ಜಾವ ಏಕಾಏಕಿ ನುಗ್ಗಿದ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.

ಸೇನಾ ಕಚೇರಿಯೊಳಗೆ 3 ಮಂದಿ ಭಯೋತ್ಪಾದಕರು ಅಡಗಿದ್ದು, ಅವರನ್ನು ಸದೆ ಬಡಿಯಲು ಕಾರ್ಯಾಚರಣೆ ನಡೆಸಲಾಗಿದೆ. ಘಟನೆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲು ದೆಹಲಿಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಸಭೆಯಲ್ಲಿ ರಕ್ಷಣಾ ಹಾಗೂ ಗೃಹ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.


Viewing all articles
Browse latest Browse all 103032

Trending Articles



<script src="https://jsc.adskeeper.com/r/s/rssing.com.1596347.js" async> </script>