Quantcast
Channel: Latest News | Kannada Dunia | Kannada News | Karnataka News | India News
Viewing all articles
Browse latest Browse all 103032

ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾದ ಪೊಲೀಸ್

$
0
0
ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾದ ಪೊಲೀಸ್

ಚಿತ್ರದುರ್ಗ: ಡೆತ್ ನೋಟ್ ಬರೆದಿಟ್ಟು ಪೊಲೀಸ್ ಪೇದೆಯೊಬ್ಬ ನಾಪತ್ತೆಯಾದ ಘಟನೆ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸಪುರದಲ್ಲಿ ನಡೆದಿದೆ.

ಕವಿರಾಜ್ (27) ನಾಪತ್ತೆಯಾದವರು. ಅವರು ವಾಣಿವಿಲಾಸಪುರದ ಮನೆಯಲ್ಲಿ 3 ಪುಟಗಳ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಮಾನಸಿಕ ಕಿರುಕುಳ ನೀಡಿರುವುದಾಗಿ ಅವರು ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ಅವರನ್ನು 4 ತಿಂಗಳ ಹಿಂದೆ ಹೈವೇ ಪೆಟ್ರೋಲಿಂಗ್ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು.

ಇತ್ತೀಚೆಗೆ ಎ.ಸಿ.ಬಿ. ಗೆ ವರ್ಗಾವಣೆ ಮಾಡಲಾಗಿತ್ತು. ಪದೇ ಪದೇ ವರ್ಗಾವಣೆಯಿಂದ ಮನನೊಂದ ಅವರು, ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಫ್ತಿಯಲ್ಲಿ ಪ್ರಕರಣ ನಡೆದಿದೆ.


Viewing all articles
Browse latest Browse all 103032

Trending Articles



<script src="https://jsc.adskeeper.com/r/s/rssing.com.1596347.js" async> </script>